ಮಹಿಳಾ ಸಬಲೀಕರಣವು ಕೇವಲ ಮಹಿಳೆಯರ ಉಡುಗೆ – ತೊಡುಗೆಗಳಿಗೆ ಸೀಮಿತವಾದದ್ದಲ್ಲ. ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಮುಂದುವರಿಯಬೇಕಾಗಿದೆ. ಆಗ ಮಾತ್ರ ಮಹಿಳಾ ಸಬಲೀಕರಣಕ್ಕೆ ಮಹತ್ವ ಸಿಗುತ್ತದೆ ಎಂದು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಆಶಾ ಬೆಳ್ಳಾರೆ ಅವರು ಹೇಳಿದರು.
ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯ, ಹುಬ್ಬಳ್ಳಿ ಮತ್ತು ವಿವೇಕಾನಂದ ಕಾನೂನು ಮಹಾವಿದ್ಯಾಲಯ ಇದರ ರಾಷ್ಟ್ರೀಯ ಸೇವಾ ಯೋಜನೆಯ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆಯುತ್ತಿರುವ ವಾರ್ಷಿಕ ವಿಶೇಷ ಶಿಬಿರದ ಮೂರನೆಯ ದಿನದ ಶೈಕ್ಷಣಿಕ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ತಮ್ಮ ಜೀವನದ ಅನುಭವಗಳನ್ನು ಹಂಚಿಕೊಂಡರು.
ಕಾನೂನು ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಕೆ. ಜಿ. ಕೃಷ್ಣಮೂರ್ತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಿಬಿರಾರ್ಥಿ ರಂಜಿತಾ ರೈ ನಿರೂಪಿಸಿದರು. ಶಿಬಿರಾರ್ಥಿ ವೀರ ಜೆನ್ನಿಫರ್ ಡಿಸೋಜ ವಂದಿಸಿದರು.