ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಎರಡನೆಯ ದಿನದ ಶೈಕ್ಷಣಿಕ ಕಾರ್ಯಕ್ರಮದಲ್ಲಿ, ಮತದಾನ ಮಾಡುವ ವಿವಿಪ್ಯಾಟ್ ಯಂತ್ರದ ಕುರಿತು ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ನಡೆಯಿತು. ಮಂಗಳೂರಿನ ವಯಸ್ಕರ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ ಮತ್ತು ಸ್ವೀಪ್ ಇದರ ಜಿಲ್ಲಾ ಕಾರ್ಯದರ್ಶಿಗಳಾದ ಶ್ರೀ ಸುಧಾಕರ ಕೆ. ಮತದಾನ ಪ್ರಕ್ರಿಯೆ, ವ್ಯವಸ್ಥೆ, ವಿವಿಪ್ಯಾಟ್ನ ಕಾರ್ಯವೈಖರಿಯ ಬಗ್ಗೆ ವಿವರಿಸಿದರು.
ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕರಾದ ಶ್ರೀ ನವೀನ್ ಭಂಢಾರಿ ಇವರು ವಿವಿಪ್ಯಾಟ್ ಯಂತ್ರದ ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು. ಮಹಿಳಾ ಮತ್ತು ಮಕ್ಕಳಾ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಶ್ರೀ ಸುಂದರ ಪೂಜಾರಿ, ಕಾನೂನು ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಕೆ. ಜಿ. ಕೃಷ್ಣಮೂರ್ತಿ, ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಸಹ ಶಿಕ್ಷಕಿ ಶ್ರೀಮತಿ ವೀಣಾ ಸರಸ್ವತಿ ಉಪಸ್ಥಿತರಿದ್ದರು.