ವಿವೇಕಾನಂದ ಕಾನೂನು ಮಹಾವಿದ್ಯಾಲಯ, ವಿವೇಕಾನಂದ ಆಯುರ್ವೇದ ಆಸ್ಪತ್ರೆ ಮತ್ತು ವಿವೇಕಾನಂದ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ, ಪುತ್ತೂರು ಇವರ ಸಹಯೋಗದಲ್ಲಿ ವಿಶ್ವ ಯೋಗ ದಿನದ ಪ್ರಯುಕ್ತ, ಯೋಗಾಸನದ ಕುರಿತು ಮಾಹಿತಿ ಮತ್ತು ಕಾರ್ಯಾಗಾರ ದಿನಾಂಕ 21-6-2018 ರಂದು ವಿವೇಕಾನಂದ ಕಾನೂನು ಕಾಲೇಜಿನ ಸಭಾಂಗಣದಲ್ಲಿ ನಡೆಸಲಾಯಿತು.
ಯೋಗ ಶಿಕ್ಷಕರಾದ ಶ್ರೀ ಚಂದ್ರಶೇಖರ್ ಇವರು, ಯೋಗದ ಕುರಿತು ಮಾಹಿತಿಯನ್ನು ನೀಡಿದರು. ಕಾನೂನು ಕಾಲೇಜಿನ ಪ್ರಾಶುಂಪಾಲರಾದ, ಶ್ರೀ ಕೆ. ಜಿ. ಕೃಷ್ಣಮೂರ್ತಿ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾಲೇಜಿನ ಬೋಧಕ ಮತ್ತು ಬೋಧಕೇತರ ವರ್ಗ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.